ADVERTISEMENT

ರಕ್ಕಸ ಮಿಡತೆ ನಿಯಂತ್ರಣಕ್ಕೆ ಕಾರ್ಯತಂತ್ರ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 28 ಮೇ 2020, 8:53 IST
Last Updated 28 ಮೇ 2020, 8:53 IST
ಸಚಿವ ರಮೇಶ್ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿ   

ಮೈಸೂರು: ‘ಕೃಷಿ ಇಲಾಖೆಯೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸಿ, ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.

‘ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಈಗಾಗಲೇ ಬೆಳೆ ನಾಶ ಮಾಡುತ್ತಿವೆ. ಇವು ರಾಜ್ಯ ಪ್ರವೇಶಿಸದಂತೆ ಅಗತ್ಯ ಕ್ರಮ ಜಾರಿಗೊಳಿಸುತ್ತೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಹೇಳಿದರು.

‘ಮಳೆಗಾಲ ನೋಡಿಕೊಂಡು ಮುಂಗಾರು ಹಂಗಾಮಿಗೆ ನೀರು ಕೊಡುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ಕಣಿವೆಯ ಜಲಾಶಯಗಳಿಂದ ನೀರು ಹರಿಸುವ ಅಧಿಕಾರ ನಮಗಿಲ್ಲ. ಜಲಾಶಯಗಳಲ್ಲಿನ ಸ್ಥಿತಿಗತಿ ಗಮನಿಸಿ, ಕೇಂದ್ರ ಜಲ ಆಯೋಗವೇ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈಚೆಗಷ್ಟೇ ಆಯೋಗ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದಾರೆ’ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

ADVERTISEMENT

ಹೈಕಮಾಂಡ್ ನಿರ್ಧಾರ: ‘ಎಚ್‌.ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ವಿಷಯದಲ್ಲಿ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.