ADVERTISEMENT

ಶಾಲೆಗೆ ವಿದ್ಯಾರ್ಥಿಗೆ ಪ್ರವೇಶ: ಪ್ರತಿಭಟನೆ ಅಂತ್ಯ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 5:00 IST
Last Updated 19 ಫೆಬ್ರುವರಿ 2021, 5:00 IST

ಪಿರಿಯಾಪಟ್ಟಣ: ಜಿಲ್ಲಾಧಿಕಾರಿಗಳ ಆದೇಶ ಪಾಲಿಸಿದ ತಾಲ್ಲೂಕಿನ ಗಿರುಗೂರಿನ ಮಿಳಿಂದ ವಿದ್ಯಾ ಸಂಸ್ಥೆಯು ಗುರುವಾರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯನ್ನು ಶಾಲೆಗೆ 8ನೇ ತರಗತಿ ಪ್ರವೇಶಕ್ಕೆ ಅನುಮತಿ ನೀಡಿ ದಾಖಲು ಮಾಡಿಕೊಂಡಿದ್ದರಿಂದ ದಲಿತ ಸಂಘಟನೆಗಳ ಕಾರ್ಯಕರ್ತರು ವಾರದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು.

ಸಂಸ್ಥೆಯ ವಿರುದ್ಧ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ತಹಶೀಲ್ದಾರ್ ಮತ್ತು ಬಿಇಒ ಮನವೊಲಿಸುವಲ್ಲಿ ಬುಧವಾರ ಯಶಸ್ವಿಯಾಗಿದ್ದರು.

ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿ ಯತೀಶ್‌ನಿಂದ ನಿಗದಿತ ಶುಲ್ಕ ಪಡೆದು ಶಾಲೆಗೆ ದಾಖಲು ಮಾಡಿಕೊಂಡಿದ್ದರಿಂದ ಒಂದು ವಾರದಿಂದ ಕಗ್ಗಂಟಾಗಿದ್ದ ಸಮಸ್ಯೆ ಬಗೆಹರಿಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.