ಮೈಸೂರು: ಅಪಘಾತ ಮಾಡಿ ವ್ಯಕ್ತಿಯೊಬ್ಬರನ್ನು ಗಾಯಗೊಳಿಸಿದ ಆಟೊ ಚಾಲಕ ಶಿವಕುಮಾರ್ (25) ಪೊಲೀಸರಿಗೆ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಸಾಲ ಮಾಡಿ ಆಟೊ ಖರೀದಿಸಿದ್ದರು. ಕಳೆದ ವಾರ ವ್ಯಕ್ತಿಯೊಬ್ಬರಿಗೆ ಗುದ್ದಿ ಪರಾರಿಯಾಗಿದ್ದರು. ಪೊಲೀಸರು ಆಟೊವನ್ನು ವಶಪಡಿಸಿಕೊಂಡರು. ಇದರಿಂದ ಹೆದರಿದ ಶಿವಕುಮಾರ್ ಸೆಲ್ಫಿ ವಿಡಿಯೊ ಮಾಡಿ ಗಾಯಾಳುವಿನ ಕ್ಷಮೆ ಕೋರಿ, ಕುಟುಂಬದ ಸದಸ್ಯರಿಗೆ ತೊಂದರೆ ನೀಡಬಾರದು ಎಂದು ಮನವಿ ಮಾಡಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.