ಮೈಸೂರು: ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮೈಸೂರು ಮೃಗಾಲಯದ ಪ್ರಾಣಿ-ಪಕ್ಷಿಗಳ ಪಾಲನೆ- ಪೋಷಣೆಗಾಗಿ ಮತ್ತೆ ₹ 20 ಲಕ್ಷ ದೇಣಿಗೆ ನೀಡಿದ್ದಾರೆ.
‘ಈ ಹಿಂದೆ ಕೋವಿಡ್ನಿಂದ ಮೃಗಾಲಯ ಮುಚ್ಚಿದ್ದ ಅವಧಿಯಲ್ಲಿ,ಸುಧಾಮೂರ್ತಿ ಅವರು ₹ 20 ಲಕ್ಷ ನೀಡಿದ್ದರು. ಮೃಗಾಲಯದ ಬಗ್ಗೆ ಅವರಿಗಿರುವ ಅಭಿಮಾನ, ಕಾಳಜಿಯನ್ನು ಅಭಿನಂದಿಸುತ್ತೇವೆ’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದತ್ತು ಸ್ವೀಕಾರ: ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ ಅಡಿಯಲ್ಲಿ ಬೆಂಗಳೂರಿನ ಯಶ್ಮಿಕ ಎಂಬವರು ₹ 1.75 ಲಕ್ಷ ಪಾವತಿಸಿ ‘ಏಷ್ಯಾಟಿಕ್ ಆನೆ’ಯನ್ನು ದತ್ತು ಸ್ವೀಕರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.