ADVERTISEMENT

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಬೆಂಬಲಿಸುವೆ: ಜೆಡಿಎಸ್‌ ಶಾಸಕ

ಜೆಡಿಎಸ್‌ ಶಾಸಕ ಕೆ.ಮಹದೇವ್ ಹೇಳಿಕೆ; ₹1.10 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 19:07 IST
Last Updated 28 ಜನವರಿ 2023, 19:07 IST
   

‌ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‌‌‘ನಾನೂ ಸಿದ್ದರಾಮಯ್ಯ ಅಭಿಮಾನಿ. ಅವರು ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧವಿದ್ದೇನೆ. ಇದನ್ನು ಕುರುಬ ಸಮಾಜದವರು ಮನಸ್ಸಿನಲ್ಲಿಟ್ಟುಕೊಳ್ಳಬೇಕು‌’ ಎಂದು ಜೆಡಿಎಸ್‌ ಶಾಸಕ ಕೆ.ಮಹದೇವ್ ಹೇಳಿದರು.

ತಾಲ್ಲೂಕಿನ ಇಟಗಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅನುದಾನ ತಂದು ತಾಲ್ಲೂಕನ್ನು ಅಭಿವೃದ್ಧಿಪಡಿಸುವ ಸುವರ್ಣಾವಕಾಶವನ್ನು ಆಗಿನ ಶಾಸಕ ಕೆ.ವೆಂಕಟೇಶ್ ಕೈಚೆಲ್ಲಿದರು. ತಮ್ಮ ವಿಲಾಸಿ ಜೀವನಶೈಲಿಯಿಂದ ತಾಲ್ಲೂಕನ್ನು ಹಿಂದುಳಿಯುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT