ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‘ನಾನೂ ಸಿದ್ದರಾಮಯ್ಯ ಅಭಿಮಾನಿ. ಅವರು ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧವಿದ್ದೇನೆ. ಇದನ್ನು ಕುರುಬ ಸಮಾಜದವರು ಮನಸ್ಸಿನಲ್ಲಿಟ್ಟುಕೊಳ್ಳಬೇಕು’ ಎಂದು ಜೆಡಿಎಸ್ ಶಾಸಕ ಕೆ.ಮಹದೇವ್ ಹೇಳಿದರು.
ತಾಲ್ಲೂಕಿನ ಇಟಗಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅನುದಾನ ತಂದು ತಾಲ್ಲೂಕನ್ನು ಅಭಿವೃದ್ಧಿಪಡಿಸುವ ಸುವರ್ಣಾವಕಾಶವನ್ನು ಆಗಿನ ಶಾಸಕ ಕೆ.ವೆಂಕಟೇಶ್ ಕೈಚೆಲ್ಲಿದರು. ತಮ್ಮ ವಿಲಾಸಿ ಜೀವನಶೈಲಿಯಿಂದ ತಾಲ್ಲೂಕನ್ನು ಹಿಂದುಳಿಯುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.