ADVERTISEMENT

ನೇಣಿಗೆ ಶರಣಾದ ಗೃಹಿಣಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 15:31 IST
Last Updated 12 ಜುಲೈ 2020, 15:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮೈಸೂರು: ಪತಿಯ ಸಾವಿನಿಂದ ಮನನೊಂದಿದ್ದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರಿನ ಜೆ.ಪಿ.ನಗರದ ನಿವಾಸಿ ಮಧುಸೂದನ್ ಎಂಬುವರ ಪತ್ನಿ ಚಾಂದಿನಿ (25) ಆತ್ಮಹತ್ಯೆ ಮಾಡಿಕೊಂಡವರು.

ಕೆಲ ದಿನಗಳ ಹಿಂದಷ್ಟೇ ಇವರ ಪತಿ ಮಧುಸೂದನ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಐದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಚಾಂದಿನಿಗೆ ಮತ್ತೊಂದು ಮದುವೆ ಮಾಡಲು ಮನೆಯವರು ಮಾತುಕತೆ ನಡೆಸುತ್ತಿದ್ದರು.

ADVERTISEMENT

ಈ ವಿಚಾರ ಚಾಂದಿನಿಗೆ ಗೊತ್ತಾಗಿದ್ದರಿಂದ, ಪತಿಯ ನೆನಪಿನಿಂದ ಹೊರ ಬರಲಾಗದೆ ಶನಿವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರಣ್ಯಪುರಂ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.