ADVERTISEMENT

ಸಚಿವ ಎಸ್.ಟಿ‌.ಸೋಮಶೇಖರ್ ಟಾಂಗಾ ಸವಾರಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 16:12 IST
Last Updated 29 ಸೆಪ್ಟೆಂಬರ್ 2022, 16:12 IST
   

ಮೈಸೂರು: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಗುರುವಾರ ರಾತ್ರಿ ಟಾಂಗಾ ಸವಾರಿ ಮಾಡಿ ದೀಪಾಲಂಕಾರ ವ್ಯವಸ್ಥೆಯನ್ನು ವೀಕ್ಷಿಸಿದರು.

ಸರ್ಕಾರಿ ಅತಿಥಿ ಗೃಹದಿಂದ ಹೇಮಚಂದ್ರ ವೃತ್ತ, ಜಯಚಾಮರಾಜೇಂದ್ರ ಒಡೆಯರ್ ವೃತ್ತ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ, ವಿಶ್ವೇಶ್ವರಯ್ಯ ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಂಚೆ ಕಚೇರಿ ವೃತ್ತದ ಮಾರ್ಗದಲ್ಲಿ ತೆರಳಿದರು.

‘ದಸರಾ ವೀಕ್ಷಣೆಗೆ ದೇಶ–ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ಬಾರಿ ಅದ್ಧೂರಿಯಾಗಿ ದೀಪಾಲಂಕಾರ ಮಾಡಲಾಗಿದೆ. ಟಾಂಗಾದಲ್ಲಿ ಸವಾರಿ ಮಾಡಿ ದೀಪಾಲಂಕಾರ ವೀಕ್ಷಿಸಿದರೆ, ನಗರದ ಸೊಬಗನ್ನು ಕಣ್ತುಂಬಿಕೊಳ್ಳುವ ಜೊತೆಗೆ ಟಾಂಗಾ ಸವಾರಿಗೂ ಉತ್ತೇಜನ ನೀಡಿದಂತಾಗುತ್ತದೆ. ಇದಕ್ಕಾಗಿ ಟಾಂಗಾ ಸವಾರಿ ಮಾಡಿದೆ’ ಎಂದು ಸಚಿವರು ಹೇಳಿದರು.

ADVERTISEMENT

ಬಳಿಕ ಟಾಂಗಾ ಮಾಲೀಕರಿಗೆ ಉಡುಗೊರೆ ನೀಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಕೂಡ ಟಾಂಗಾ ಸವಾರಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.