ADVERTISEMENT

ತೇಗದ ಮರದ ತುಂಡುಗಳು ವಶ

​ಪ್ರಜಾವಾಣಿ ವಾರ್ತೆ
Published 4 ಮೇ 2019, 20:17 IST
Last Updated 4 ಮೇ 2019, 20:17 IST

ಪಿರಿಯಾಪಟ್ಟಣ: ತಾಲ್ಲೂಕಿನ ಗಿರಿಗೂರಿನ ಮಿಳಿಂದ ವಿದ್ಯಾಸಂಸ್ಥೆಯ ಮೇಲೆ ಅರಣ್ಯ ಇಲಾಖೆ ಶುಕ್ರವಾರ ದಾಳಿ ನಡೆಸಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 20 ತೇಗದ ಮರದ ತುಂಡುಗಳನ್ನು ವಶಕ್ಕೆ ಪಡೆದು ಸಂಸ್ಥೆಯ ಮುಖ್ಯಸ್ಥ ಹಾಗೂ ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

ಸಂಸ್ಥೆಯ ಆವರಣದಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಕತ್ತರಿಸಿ ಸಿದ್ದ ಪಡಿಸಿದ್ದ 20 ಕಟ್‍ ಪೀಸ್‍ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದಾಗಿ ಮಾಹಿತಿ ಪಡೆದ ಆರ್‍ಎಫ್‍ಓ ರತನ್‍ಕುಮಾರ್ ತಂಡ ದಾಳಿ ನಡೆಸಿದೆ.

ಸಾರ್ವಜನಿಕರು ನೀಡಿದ ದೂರಿನಂತೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಗೋವಿಂದಯ್ಯ, ಧರ್ಮದರ್ಶಿ ಅಣ್ಣಯ್ಯ, ಶಾಲೆಯ ಮುಖ್ಯಶಿಕ್ಷಕಿ ಹೇಮಾವತಿ, ಶಿಕ್ಷಕರಾದ ಸುರೇಶ್ ಮತ್ತು ಆಶಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.