ಹುಣಸೂರು: ಮುನೇಶ್ವರ ಕಾವಲ್ ಮೈದಾನದಲ್ಲಿ ಧ್ವಜಾರೋಹಣ ಸಮಯದಲ್ಲಿ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಅರ್ಧಕ್ಕೆ ಜಾರಿ ಆತಂಕ ಮೂಡಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಸಿಬ್ಬಂದಿ ಸರಿಪಡಿಸಿದರು.
ಪಥ ಸಂಚಲನ ವೇಳೆಯಲ್ಲಿ ಧ್ವಜವಂದನೆ ಸ್ವೀಕರಿಸುವ ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿ ಶಾಲಾ ಮಕ್ಕಳಿಗೆ ಕಿರಿಕಿರಿ ಆಗಿತ್ತು. ನಾಗರಿಕರನ್ನು ಹಿಂದಕ್ಕೆ ಕಳುಹಿಸುವಲ್ಲಿ ಪೊಲೀಸರೂ ಕೈ ಚೆಲ್ಲಿದರು. ಕಾರ್ಯಕ್ರಮ ನಿರೂಪಣೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಬಂದಿತು. ಈ ಎಲ್ಲಾ ಗೊಂದಲಗಳ ನಡುವೆ ಧ್ವನಿವರ್ಧಕವೂ ಕೆಲ ಕಾಲ ಕೈಕೊಟ್ಟಿತ್ತು.
ನಡೆದ ಲೋಪ ಕುರಿತು ಮಾಧ್ಯಮ ಪ್ರತಿನಿಧಿಗಳು ಶಾಸಕ ಹರೀಶ್ ಗೌಡ ಅವರ ಗಮನಕ್ಕೆ ತಂದಾಗ, ಅವರು ಪೊಲೀಸ್ ಮತ್ತು ತಾಲ್ಲೂಕು ಆಡಳಿತದ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.