ADVERTISEMENT

‘ತಿರುಪತಿ–ಪಾರದರ್ಶಕವಾಗಿ ಕಾಮಗಾರಿ’

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 6:28 IST
Last Updated 11 ಅಕ್ಟೋಬರ್ 2020, 6:28 IST
ಶ್ರೀನಿವಾಸ ಪೂಜಾರಿ
ಶ್ರೀನಿವಾಸ ಪೂಜಾರಿ   

ಮೈಸೂರು: ‘ರಾಜ್ಯದಿಂದ ಹೋಗುವ ಭಕ್ತರಿಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ತಿರುಪತಿಯಲ್ಲಿ ವಸತಿ ಗೃಹ ನಿರ್ಮಿ ಸಲಾ ಗುತ್ತಿದ್ದು, ಕಾಮಗಾರಿ ಪಾರದರ್ಶಕವಾಗಿ ನಡೆಯಲಿದೆ. ಸಾ.ರಾ.ಮಹೇಶ್‌ ಅವರಿಗೆ ಅನುಮಾನವಿದ್ದರೆ ಮುಕ್ತವಾಗಿ ಚರ್ಚಿಸಬಹುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಇಲ್ಲಿ ಹೇಳಿದರು.

‘ಈ ವಿಚಾರವಾಗಿ ಈಗಾಗಲೇ ಸದನದಲ್ಲಿ ಕೂಡ ಚರ್ಚಿಸಲಾಗಿದೆ. ಅನಿವಾರ್ಯವಾಗಿ ಆಂಧ್ರ‍ಪ್ರದೇಶದ ಸಂಸ್ಥೆಗಳ ಮೂಲಕ ಕಾಮಗಾರಿ ಮಾಡಿಸಲಾಗುತ್ತಿದೆ’ ಎಂದರು

ದಸರಾ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡುವುದರಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರ್ಚಕರು ಕೂಡ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಸಂಬಂಧ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.