ADVERTISEMENT

ಸರಗೂರು ಬಳಿ ಹತ್ತಿ ಹೊಲಕ್ಕೆ ನುಗ್ಗಿದ ಹುಲಿ: ದಾಳಿಯಿಂದ ರೈತನಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 13:28 IST
Last Updated 16 ಅಕ್ಟೋಬರ್ 2025, 13:28 IST
<div class="paragraphs"><p>ಮೈಸೂರು&nbsp;ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗನಪುರ ಗ್ರಾಮದಲ್ಲಿ ರೈತರ ಮೇಲೆ ದಾಳಿ ಮಾಡಿದ ಹುಲಿ</p></div>

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗನಪುರ ಗ್ರಾಮದಲ್ಲಿ ರೈತರ ಮೇಲೆ ದಾಳಿ ಮಾಡಿದ ಹುಲಿ

   

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗನಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಗುರುವಾರ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಹುಲಿಯು ರೈತರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.

‘ಭೀಮ’ ಆನೆಯನ್ನು ಬಳಸಿಕೊಂಡು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಕಾಡಂಚಿನಲ್ಲಿರುವ ಬಡಗಲಪುರ ಬಳಿ ಹುಲಿ ದಾಳಿ ಮಾಡಿದೆ. ರೈತ ಮಾದೇಗೌಡ ಎನ್ನುವವರು ತಮ್ಮ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದಾಗ ಘಟನೆ ನಡೆದಿದೆ.

ADVERTISEMENT

ಇತರ ಜಮೀನುಗಳ ರೈತರು ಮರವನ್ನೇರಿ ಅಪಾಯದಿಂದ ಪಾರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.