ಹುಣಸೂರು: ನಾಗರಹೊಳೆ ಹುಲಿ ರಕ್ಷಿತಾರಣ್ಯದ ಚಿಕ್ಕಪಾಲ ಬಳಿ 6ರಿಂದ 7 ವರ್ಷ ವಯಸ್ಸಿನ ಹೆಣ್ಣು ಹುಲಿಯೊಂದರ ಕೊಳೆತ ಮೃತದೇಹ ಶನಿವಾರ ಸಂಜೆ ಪತ್ತೆಯಾಗಿದೆ.
ಹುಲಿಯ ಕುತ್ತಿಗೆ ಭಾಗದಲ್ಲಿ ಬಲವಾದ ಗಾಯಗಳಾಗಿದ್ದು, ಹುಲಿಗಳ ನಡುವೆ ಕಾದಾಟ ಸಂಭವಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ನಂತರವಷ್ಟೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಹುಲಿ ಯೋಜನೆ ನಿರ್ದೇಶಕ ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.