ADVERTISEMENT

ಮೈಸೂರು| ದಂತಚೋರರ ಬಂಧನ: 25 ಕೆ.ಜಿ ಆನೆದಂತ ವಶ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 2:01 IST
Last Updated 3 ನವೆಂಬರ್ 2020, 2:01 IST
ಆರೋಪಿಗಳಿಂದ ವಶಪಡಿಸಿಕೊಂಡ ಆನೆದಂತಗಳು
ಆರೋಪಿಗಳಿಂದ ವಶಪಡಿಸಿಕೊಂಡ ಆನೆದಂತಗಳು   

ಮೈಸೂರು: ಅಂತರರಾಜ್ಯ ದಂತಚೋರ ಸೇರಿದಂತೆ ನಾಲ್ವರನ್ನು ಇಲ್ಲಿನ ಅರಣ್ಯ ಸಂಚಾರ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿಇವರಿಂದ 25 ಕೆ.ಜಿ ತೂಕದ ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ.

ತಿರುವನಂತಪುರದ ಪ್ರೆಸ್ಟಿನ್ ಸೆಲ್ವ, ಜಯಪ್ರಕಾಶ್‌, ಇಲ್ಲಿನ ಉದಯಗಿರಿಯ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಬಂಧಿತರು.

ಬನ್ನಿಮಂಪಟದ ಕೆಳಸೇತುವೆ ಬಳಿ ಇವರು 4 ಆನೆದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಒಂದು ಕೆ.ಜಿಗೆ ₹ 20 ಸಾವಿರದಂತೆ ಮಾರಾಟ ಮಾಡುತ್ತಿದ್ದರು. ಇವರಲ್ಲಿ ಪ್ರೆಸ್ಟಿನ್ ಸೆಲ್ವ ವಿರುದ್ಧ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ರಮೇಶ್ ಮತ್ತು ಮೋಹನ್ ವಿಗ್ರಹ ಕೆತ್ತುವ ಕಲಾವಿದರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಡಿಸಿಎಫ್ ಎ.ಟಿ.ಪೂವಯ್ಯ, ಎಸಿಎಫ್ ಸುವರ್ಣ, ಆರ್‌ಎಫ್‌ಒ ವಿವೇಕ್, ಸಿಬ್ಬಂದಿಯಾದ ಮೋಹನ್, ಲಕ್ಷ್ಮೀಶ್, ಸುಂದರ್, ಪ್ರಮೋದ್, ತುಷಾರಾ, ಸ್ನೇಹಾ, ಮೇಘನಾ, ಚನ್ನಬಸವಯ್ಯ, ಗೋವಿಂದ, ರವಿನಂದನ್, ರವಿಕುಮಾರ್, ಮಹಾಂತೇಶ್, ಮಧು, ಪುಟ್ಟಸ್ವಾಮಿ, ಕೊಟ್ರೇಶ ಪೂಜಾರ್, ವಿರೂಪಾಕ್ಷ ಕಾರ್ಯಾಚರಣೆ ತಂಡದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.