ADVERTISEMENT

ಮೈಸೂರು: 22 ಅಂಗವಿಕಲರಿಗೆ ತ್ರಿಚಕ್ರವಾಹನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 12:37 IST
Last Updated 27 ಫೆಬ್ರುವರಿ 2026, 12:37 IST
   

ಮೈಸೂರು: ಇಲ್ಲಿನ ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ 22 ಮಂದಿ ಅಂಗವಿಕಲರಿಗೆ ಯಾಂತ್ರಿಕ ತ್ರಿಚಕ್ರವಾಹನಗಳನ್ನು ನೀಡಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್‌ಗಳ ಇಲಾಖೆ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಉದ್ಯೋಗದಾತರ ಸಹಯೋಗದಲ್ಲಿ ಸಿಎಸ್‌ಆರ್‌ ನಿಧಿಯಲ್ಲಿ ವಿವಿಧ ಉದ್ಯೋಗದಾತರು ಒದಗಿಸಿದ ತ್ರಿಚಕ್ರವಾಹನಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ.

ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ವಾಹನದ ಕೀಗಳನ್ನು ಹಸ್ತಾಂತರಿಸಿದರು.

ADVERTISEMENT

ನಂತರ ಮಾತನಾಡಿದ ಅವರು, ‘ಅಂಗವಿಕಲರ ಅನುಕೂಲಕ್ಕಾಗಿ ಎಂಜಿನಿಯರ್‌ಗಳು ವಾಹನಗಳನ್ನು ವಿನ್ಯಾಸ ಮಾಡಿರುವುದನ್ನು ನೋಡಿದರೆ ಸಂತಸವಾಗುತ್ತದೆ. ಅಂಗವಿಕಲರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಇಂತಹ ಯೋಜನೆಗಳನ್ನು ಮತ್ತಷ್ಟು ರೂಪಿಸಬೇಕು’ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಜಂಟಿ ನಿರ್ದೇಶಕ ಎಚ್.ಎಸ್. ನರೇಂದ್ರಬಾಬು, ಉಪ ನಿರ್ದೇಶಕ ಎಂ.ಎಸ್. ಮಹದೇವು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಬಸವರಾಜು, ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾಬಾಯಿ ಎಲ್., ಕಾರ್ಮಿಕ ಅಧಿಕಾರಿ ಚೇತನ್‌ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.