ನಂಜನಗೂಡು: ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಇಲ್ಲಿನ ಇಮ್ಮಾವು ಗ್ರಾಮದಲ್ಲಿ ವಾಸವಿದ್ದ ಮಹಮ್ಮದ್ ಅಬ್ದುಲ್ಲಾ (27) ಹಾಗೂ ಮಹಮ್ಮದ್ ಅಬೀಬುಲ್ಲಾ (23) ಎಂಬುವವರನ್ನು ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
‘ಇವರು ಒಂದು ವರ್ಷದಿಂದ ತಾಂಡ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರ ಬಳಿ ಪಾಸ್ಪೋರ್ಟ್ ಹಾಗೂ ವೀಸಾ ಇರಲಿಲ್ಲ. ಹಾಗಾಗಿ, ಇವರ ಮೇಲೆ ಪಾಸ್ಪೋರ್ಟ್ ಕಾಯ್ದೆ ಹಾಗೂ ಭಾರತೀಯ ವಿದೇಶಿಯರ ಕಾಯ್ದೆಯನ್ವಯ ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಪಿಎಸ್ಐ ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.