ADVERTISEMENT

ನೀರಿಗೆ ಬಿದ್ದು ಮಕ್ಕಳಿಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 5:28 IST
Last Updated 31 ಆಗಸ್ಟ್ 2021, 5:28 IST

ಬೆಟ್ಟದಪುರ: ಇಲ್ಲಿಗೆ ಸಮೀಪದ ಕಿತ್ತೂರು ದೊಡ್ಡೇಗೌಡನ ಕೊಪ್ಪಲು ಗ್ರಾಮದಲ್ಲಿ ಸೋಮವಾರ ಸಂಜೆ ಆಟವಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ತಂಬಾಕು ಸಸಿಗೆ ನೀರು ಹಾಯಿಸಲು ತೆಗೆದಿರುವ ಗುಂಡಿಯೊಳಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಗ್ರಾಮದ ಗೋಪಾಲೇಗೌಡ ಮಗಳು ನಿಶಾ (10), ವೆಂಕಟೇಶ್ ಪುತ್ರಿ ಅಕ್ಷಿತಾ (10) ಮೃತಪಟ್ಟ ಮಕ್ಕಳು.

ಈ ಇಬ್ಬರು ಅಕ್ಕಪಕ್ಕದ ಮನೆಯವರು. ಗದ್ದೆ ಉಳುಮೆ ಮಾಡುವುದನ್ನು ನೋಡಲು ತೆರಳಿದ್ದರು. ಅಲ್ಲಿಯೇ ಆಟವಾಡುತ್ತಿದ್ದ ಇಬ್ಬರೂ; ತಂಬಾಕು ಸಸಿ ನಾಟಿಗಾಗಿ ತೆಗೆದಿದ್ದ ಸುಮಾರು ಹತ್ತು ಅಡಿ ಆಳದ ನೀರಿನ ಗುಂಡಿಗೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ.

ADVERTISEMENT

ಸಂಜೆಯಾದರೂ ಮನೆಗೆ ಮಕ್ಕಳು ಮರಳದಿದ್ದಾಗ ಗಾಬರಿಗೊಂಡ ಪೋಷಕರು ಗ್ರಾಮದಲ್ಲಿ ಹುಡುಕಾಡಿದ್ದಾರೆ. ರಾತ್ರಿ 8 ಗಂಟೆ ಸಮಯದಲ್ಲಿ ಜಮೀನಿನ ಬಳಿಗೆ ಹೋಗಿ ಗುಂಡಿ ಹತ್ತಿರ ನೋಡಿದಾಗ ಮೃತದೇಹ ಪತ್ತೆಯಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ತಡರಾತ್ರಿಯಾದರು ದೂರು ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.