ಮೈಸೂರು: ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ಸಂಬಂಧಿಸಿ ಕೆ.ಆರ್.ವಿಭಾ ಗದ ಎಸಿಪಿ ನೇತೃತ್ವದಲ್ಲಿ 2 ತನಿಖಾ ತಂಡ ರಚಿಸಲಾಗಿದ್ದು, ಆರೋಪಿಗಳ ಶೋಧಕಾರ್ಯ ಶುರುವಾಗಿದೆ.
ಮೈಸೂರಿನ ಹೊರವಲಯದ ಲಿಂಗಾಂಬುಧಿಪಾಳ್ಯ ಬಳಿಯ ಖಾಸಗಿ ಬಡಾವಣೆಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳು ಯುವತಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು. ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದರು. ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆದರೆ, ಘಟನೆ ನಡೆದ ಸ್ಥಳ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಬರಲಿದೆ ಎಂಬುದನ್ನು ಅರಿತು ಪ್ರಕರಣವನ್ನು ಮೈಸೂರು ನಗರ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸರು ಪ್ರಕರಣದ ಪತ್ತೆಗೆ 8 ತಂಡ ರಚಿಸಿದ್ದಾರೆ. ಜಯಪುರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.
ಸಿ.ಸಿ.ಟಿ.ವಿ. ಕ್ಯಾಮೆರಾ ಪರಿಶೀಲನೆ: ಪ್ರಕರಣದ ಸುಳಿವು ಪತ್ತೆಗೆ ಪೊಲೀಸರು ಹೊರವರ್ತುಲ ರಸ್ತೆ ಆಸುಪಾಸಿನ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮೊಬೈಲ್ ಟವರ್ಗಳ ಸಹಾಯದಿಂದ ಘಟನೆ ವೇಳೆ ಚಾಲ್ತಿಯಲ್ಲಿದ್ದ ಮೊಬೈಲ್ ಫೋನ್ಗಳನ್ನೂ ಪರಿಶೀಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.