ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಟೈರ್ ಪಂಚರ್ ಆಗಿ ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ಗೆ ಡಿಕ್ಕಿಯಾಗಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತರನ್ನು ಮೈಸೂರು ಹೊರವಲಯದ ಆಲನಹಳ್ಳಿಯ ಚಂದ್ರಶೇಖರ ಮೂರ್ತಿ ಎಂಬವರ ಪುತ್ರಿ ಸಾಫ್ಟ್ವೇರ್ ಎಂಜಿನಿಯರ್ ಜೀವಿತಾ (24) ಹಾಗೂ ಆಕೆಯ ಗೆಳತಿ ಬೆಂಗಳೂರಿನ ಕೆ.ಪಿ. ಅಗ್ರಹಾರದ ಪ್ರಸನ್ನ ಎಂಬವರ ಪುತ್ರಿ ಪ್ರತೀಕ್ಷಾ (24) ಎಂದು ಗುರುತಿಸಲಾಗಿದೆ.
ಅವರು ಮೈಸೂರು ಕಡೆಯಿಂದ ಹುಣಸೂರಿನತ್ತ ಶನಿವಾರ ಸಂಜೆ ತೆರಳುತ್ತಿದ್ದರು. ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.