ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಸಿ.ಎನ್.ಶ್ರೀಧರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿ.ವಿ.ಯ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕರಾದ ಆರ್.ಶಿವಪ್ಪ ಅವರು ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಧರ್ ಅವರು ಈ ಮುಂಚೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ದಲ್ಲಿ ಆಡಳಿತ ಹಾಗೂ ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.