ADVERTISEMENT

ವರದರಾಜ ಸ್ವಾಮಿ, ಚಾಮುಂಡೇಶ್ವರಿ ದೇಗುಲಕ್ಕೆ ವಿದ್ಯುತ್ ಅಲಂಕಾರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 3:00 IST
Last Updated 24 ಸೆಪ್ಟೆಂಬರ್ 2025, 3:00 IST
ಎಚ್.ಡಿ.ಕೋಟೆ ಪಟ್ಟಣದ ವರದರಾಜಸ್ವಾಮಿ ದೇವಸ್ಥಾನದ ಗೋಪುರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿರುವುದು
ಎಚ್.ಡಿ.ಕೋಟೆ ಪಟ್ಟಣದ ವರದರಾಜಸ್ವಾಮಿ ದೇವಸ್ಥಾನದ ಗೋಪುರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿರುವುದು   

ಮೈಸೂರು: ಪಟ್ಟಣದ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಮತ್ತು ಹೌಸಿಂಗ್ ಬೋರ್ಡಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಉತ್ಸವ ಮತ್ತು ನವರಾತ್ರಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯುತ್ತಿದ್ದು, ದೇಗುಲ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದೆ.

ವರದರಾಜ ಸ್ವಾಮಿ ದೇವಸ್ಥಾನ ಹಾಗೂ ಚಾಮುಂಡೇಶ್ವರಿ ದೇವಸ್ಥಾನಗಳಿಗೆ ಈಗಾಗಲೇ ಸುಣ್ಣ ಬಣ್ಣ ಹೊಡೆದು ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ಎರಡೂ ದೇವಸ್ಥಾನಗಳಿಂದ ಪ್ರತ್ಯೇಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ವರದರಾಜಸ್ವಾಮಿ ದೇವಸ್ಥಾನದಲ್ಲಿ ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ಲಕ್ಷ್ಮೀ ದೇವರ ಮೂರ್ತಿಗೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಭಾನುವಾರದಿಂದ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆ, ಉಯ್ಯಾಲೋತ್ಸವ, ಕಲ್ಯಾಣೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯುತ್ತಿದೆ.

ADVERTISEMENT

ವಿಜಯದಶಮಿ ದಿನದಂದು ರಡೂ ದೇವಸ್ಥಾನಗಳ ಮೂಲ ದೇವರುಗಳ ಮೂರ್ತಿಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಇದರಲ್ಲಿ ಅನೇಕ ಕಲಾತಂಡಗಳು, ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ನಂತರ ಪೊಲೀಸ್ ಇಲಾಖೆಯಿಂದ ವರದರಾಜಸ್ವಾಮಿಗೆ ಗೌರವ ರಕ್ಷೆ ನೀಡುವ ಮೂಲಕ ಬನ್ನಿಮರಕ್ಕೆ ಪೊಲೀಸ್ ಪೂಜೆ ನೆರವೇರಿಸಲಾಗುತ್ತದೆ.

ಎಚ್.ಡಿ.ಕೋಟೆ ಪಟ್ಟಣದಲ್ಲಿ ನವರಾತ್ರಿ ಉತ್ಸವ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿರುವುದು
ಎಚ್.ಡಿ.ಕೋಟೆ ಪಟ್ಟಣದ ಚಾಮುಂದೇಶ್ವರಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.