ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಸಾವಿನ ವ್ಯತ್ಯಾಸ ಸಂಬಂಧ ಅಂಕಿಅಂಶಗಳನ್ನು ಮರುಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.
ಮೈಸೂರು ನಗರದಲ್ಲಿ ಕೋವಿಡ್ ಸಾವುಗಳನ್ನು ಮುಚ್ಚಿಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, 'ಈ ವಿಚಾರದ ಬಗ್ಗೆ ಸದ್ಯಕ್ಕೆ ನನ್ನ ಬಳಿ ಉತ್ತರವಿಲ್ಲ. ಅಂಕಿ ಅಂಶ ಕಲೆಹಾಕುವ ಕಾರ್ಯ ಪೂರ್ಣಗೊಂಡಿಲ್ಲ. ಮಾಹಿತಿ ಸಿಕ್ಕ ನಂತರ ವಾಸ್ತವ ಗೊತ್ತಾಗಲಿದೆ' ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಮಾತನಾಡಿ, 'ಜಿಲ್ಲಾಧಿಕಾರಿ ಹೊಸದಾಗಿ ಬಂದಿದ್ದಾರೆ. ಯಾವುದೇ ವಿಚಾರವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಸಾವಿನ ವಿಚಾರವಿರಲಿ, ಯಾವುದೇ ಇರಲಿ ಎಲ್ಲವನ್ನೂ ತಿಳಿಸುತ್ತೇವೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.