ಮೈಸೂರು: ವ್ಯಾಸ–ವಾಲ್ಮೀಕಿ ಅಧ್ಯಯನ ಪೀಠ ಆರಂಭಿಸಲು ಮೈಸೂರು ವಿಶ್ವವಿದ್ಯಾಲಯ ಮುಂದಾಗಿದೆ.
‘ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯು ಪೀಠ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಿದೆ. ಪ್ರಸ್ತಾಪವನ್ನು ಸರ್ಕಾರಕ್ಕೆ ಕಳಿಸಿಕೊಡಲು ನಿರ್ಧರಿಸಲಾಗಿದ್ದು, ಒಪ್ಪಿಗೆ ಸಿಕ್ಕರೆ ಮುಂದಿನ ಹೆಜ್ಜೆ ಇಡಲಾಗುವುದು. ಈಗಾಗಲೇ ವಾಲ್ಮೀಕಿ ಅಧ್ಯಯನ ಪೀಠ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಇದೆ. ಹೀಗಾಗಿ, ವ್ಯಾಸ–ವಾಲ್ಮೀಕಿ ಪೀಠ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.