ADVERTISEMENT

Mysuru Dasara 2023 | ಅಭಿಮನ್ಯು ಉತ್ತರಾಧಿಕಾರಿ ಯಾರು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2023, 15:21 IST
Last Updated 15 ಅಕ್ಟೋಬರ್ 2023, 15:21 IST

ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ದೇವಿ ಮೂರ್ತಿ ಇರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಆನೆಯೇ ಪ್ರಮುಖ ಆಕರ್ಷಣೆ. ಅಂಬಾರಿ ಆನೆ ಅಭಿಮನ್ಯುವಿಗೆ ಇನ್ನೂ ಎರಡು ಬಾರಿ ಅಂಬಾರಿ ಹೊರಿಸಬಹುದು. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ 60 ವರ್ಷವಾದರೆ ಆನೆಗಳ ಮೇಲೆ ಒತ್ತಡ ಹೇರುವಂತಿಲ್ಲ. ಹೀಗಾಗಿ, ಭವಿಷ್ಯದಲ್ಲಿ ಚಿನ್ನದ ಅಂಬಾರಿಯನ್ನು ಹೊರುವ ಆನೆಗೆ ಅರಣ್ಯ ಇಲಾಖೆಯು ಪ್ರತಿ ವರ್ಷವೂ ಹುಡುಕಾಟ ನಡೆಸುತ್ತದೆ. ಇದೀಗ ಅಭಿಮನ್ಯು ಸ್ಥಾನವನ್ನು ತುಂಬಬಲ್ಲ ಸಮರ್ಥ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಇಲಾಖೆಯ ಮುಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.