ADVERTISEMENT

ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ

ಅಕ್ರಮ ಸಂಬಂಧದ ಕುರಿತು ಪ್ರಶ್ನಿಸಿದ್ದ ಪತಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 6:45 IST
Last Updated 17 ಡಿಸೆಂಬರ್ 2020, 6:45 IST

ನಂಜನಗೂಡು: ಅಕ್ರಮ ಸಂಬಂಧದ ಕಾರಣ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಮಾಡಿರುವ ಘಟನೆ ಸರಗೂರು ತಾಲ್ಲೂಕಿನ ಅಡ್ಡಹಳ್ಳಿ ಗ್ರಾಮದಲ್ಲಿ ನಡೆದಿದೆ. ತನಿಖೆ ನಡೆಸಿ ಕೊಲೆಯ ಹಿಂದಿನ ರಹಸ್ಯವನ್ನು ನಂಜನಗೂಡು ಪೊಲೀಸರು ಪತ್ತೆ ಹಚ್ಚಿದ್ದು, ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸರಗೂರು ತಾಲ್ಲೂಕಿನ ಅಡ್ಡಹಳ್ಳಿ ಗ್ರಾಮದ ಶಿವರಾಜು (39) ಕೊಲೆಯಾದವರು. ಕೊಲೆ ಆರೋಪದ ಮೇಲೆ ಪತ್ನಿ ಸೌಮ್ಯಾ (31), ಪ್ರಿಯಕರ ಯೋಗೀಶ್, ಆತನ ಸ್ನೇಹಿತ ಚೆಲುವನನ್ನು ಪೊಲೀಸರು ಬಂಧಿಸಿದ್ದಾರೆ.

5 ದಿನಗಳ ಹಿಂದೆ ಶಿವರಾಜು ಅವರ ಶವ ತಾಲ್ಲೂಕಿನ ಕಪ್ಪಸೋಗೆ ಗ್ರಾಮದ ನಾಲೆಯೊಂದರಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಶವವೆಂದು ದೂರು ದಾಖಲಾಗಿತ್ತು. ಈ ಪ್ರಕರಣವನ್ನು ಪತ್ತೆಹಚ್ಚುವ ಸಲುವಾಗಿ ಸಿಪಿಐ ಲಕ್ಷ್ಮಿಕಾಂತ ತಳವಾರ್, ದೇವರಾಜು, ಸತೀಶ್, ಗುರು, ನವೀನ್, ಮಹೇಶ್, ಕಾಂತಮ್ಮ ಸೇರಿ 6 ಮಂದಿಯ ತಂಡವನ್ನು ರಚಿಸಿದ್ದರು.

ADVERTISEMENT

ಅಡ್ಡಹಳ್ಳಿ ಗ್ರಾಮದ ಶಿವರಾಜು, ಸೌಮ್ಯಾ ಅವರನ್ನು ಮದುವೆಯಾಗಿ 15 ವರ್ಷಗಳಾಗಿದ್ದು, ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಈ ನಡುವೆ ಶುಂಠಿ ತೋಟದ ಕೆಲಸಕ್ಕೆಂದು ಆಟೋದಲ್ಲಿ ಹೋಗುತ್ತಿದ್ದ ಸೌಮ್ಯಾ ಚಿಕ್ಕೋಡು ಗ್ರಾಮದ ಆಟೊ ಚಾಲಕ ಯೋಗೀಶ್ ನಡುವೆ ಸ್ನೇಹ ಬೆಳೆದು ಅಕ್ರಮ ಸಂಬಂಧವೂ ಇತ್ತು. ಈ ವಿಷಯ ತಿಳಿದ ಶಿವರಾಜು ಪತ್ನಿಯೊಂದಿಗೆ ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ. ಗಲಾಟೆ ವಿಷಯವನ್ನು ಪ್ರಿಯಕರ ಯೋಗೀಶ್‍ನಿಗೆ ತಿಳಿಸಿದಾಗ ಆತನ ಸ್ನೇಹಿತ ಚೆಲುವನ ಜೊತೆ ಸೇರಿ ಮೂವರು ಸೇರಿ ಶಿವರಾಜುವನ್ನು ಕೊಲೆ ಮಾಡಿ ನಾಲೆಗೆ ಎಸೆದಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.