ADVERTISEMENT

ಕಾಡಾನೆ ದಾಳಿ: ವ್ಯಕ್ತಿಗೆ ಗಾಯ, ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 5:15 IST
Last Updated 28 ನವೆಂಬರ್ 2019, 5:15 IST
ಹುಣಸೂರು–ಗುರುಪುರ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟಿಸಿದರು.
ಹುಣಸೂರು–ಗುರುಪುರ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟಿಸಿದರು.   

ಮೈಸೂರು: ಹುಣಸೂರು ತಾಲ್ಲೂಕಿನಲ್ಲಿ ಗುರುಪುರ ಗ್ರಾಮದ ಸಮೀಪ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರೈತ ರಮೇಶ್ ಅವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.

ತಮ್ಮ ಬಾಳೆತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿದೆ. ಗಾಯಗೊಂಡ ರಮೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

ಕಾಡಾನೆ ದಾಳಿಯಿಂದರೊಚ್ಚಿಗೆದ್ದ ಗ್ರಾಮಸ್ಥರು ಹುಣಸೂರು- ಗುರುಪುರವನ್ನು ಸಂಪರ್ಕಿಸುವ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ADVERTISEMENT
ಕಾಡಾನೆ ದಾಳಿಯಿಂದ ಗಾಯಗೊಂಡಿರುವ ರೈತ ರಮೇಶ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.