ADVERTISEMENT

ಪಿರಿಯಾಪಟ್ಟಣದಲ್ಲಿ ಹಾಡಹಗಲೆ ಮಹಿಳೆ ಕೊಲೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 9:36 IST
Last Updated 3 ಫೆಬ್ರುವರಿ 2020, 9:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸೋಮವಾರ ಹಾಡಹಗಲೆ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಇಲ್ಲಿನ ಬ್ರಾಹ್ಮಣರ ಬೀದಿಯಲ್ಲಿ ವಾಸವಿದ್ದ ಕಲಾವತಿ ಕೊಲೆಯಾದವರು. ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ದರೋಡೆ ಮಾಡಲೆಂದು ಬಂದ ದರೋಡೆಕೋರರ ಗುಂಪಿನಿಂದ ಈ ಕೃತ್ಯ ನಡೆದಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.‌

ADVERTISEMENT

ಭಾನುವಾರ ನಸುಕಿನಲ್ಲಿ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಕೋರರು ಕಾರು ಮತ್ತು ಬೈಕ್‌ನ್ನು ದರೋಡೆ ಮಾಡಿದ್ದರು. ಶನಿವಾರ ರಾತ್ರಿ ಕೆ.ಆರ್.ನಗರದಲ್ಲಿ ಕಾರನ್ನು ತಡೆದ ದರೋಡೆಕೋರರು ಚಾಲಕನ ಮೇಲೆ ಹಲ್ಲೆ ನಡೆಸಿ ನಗದು ದೋಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.