ಮೈಸೂರು: ಇಲ್ಲಿನ ಸರಸ್ವತಿಪುರಂ 4ನೇ ಮೇನ್ನಲ್ಲಿ ಸೋಮವಾರ ಬೆಳಿಗ್ಗೆ ನಾಗರತ್ನ (33) ಎಂಬುವವರ ಮೇಲೆ ಅವರ ಪತಿ ಬಂಗಾರುನಾಯಕ (44) ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತಲೆಗೆ ಪೆಟ್ಟು ಬಿದ್ದ ನಾಗರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪತಿಯ ಶೋಧ ಕಾರ್ಯ ನಡೆಸಿದ್ದಾರೆ.
ಕಳೆದ 15 ವರ್ಷಗಳ ಹಿಂದೆ ಚಾಮರಾಜನಗರದ ಬಂಗಾರುನಾಯಕನನ್ನು ನಾಗರತ್ನ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳೂ ಇದ್ದರು. ಆದರೆ, ಪತಿಯ ಜತೆ ವಿರಸದಿಂದ ನಾಗರತ್ನ ದೂರವಾಗಿದ್ದರು. ನಂತರ, ಪತಿಯ ಸಾಲವನ್ನೂ ಇವರು ತೀರಿಸಿದ್ದರು. ಮನೆಕೆಲಸ ಮಾಡಿಕೊಂಡು ತಮ್ಮ ಕೆ.ಜಿ.ಕೊಪ್ಪಲಿನ ತವರು ಮನೆಯಲ್ಲಿ ವಾಸವಿದ್ದರು.
ಮನೆಯ ಹತ್ತಿರ ಬಂದು ಜಗಳ ತೆಗೆದ ಬಂಗಾರು ನಾಯಕ ನಂತರ ಮನೆಕೆಲಸಕ್ಕೆ ಹೋಗುತ್ತಿದ್ದ ನಾಗರತ್ನ ಮೇಲೆ ಸರಸ್ವತಿಪುರಂನಲ್ಲಿ ಹಲ್ಲೆ ನಡೆಸಿದ ಎಂದು ಪೊಲೀಸರು ತಿಳಿಸಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.