ನಂಜನಗೂಡು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಪಕ್ಕದ ಮನೆಯ ಯುವಕ ಚುಡಾಯಿಸಿದ್ದಕ್ಕೆ, ಮನನೊಂದ ಗೃಹಿಣಿ ಜಯಶ್ರೀ (31) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಪತಿ ಚಿನ್ನಸ್ವಾಮಿ ಕೂಲಿ ಕೆಲಸಕ್ಕೆ ಹೋದ ನಂತರ ಮಂಜು (27) ಎಂಬಾತ ನಿತ್ಯ ಮನೆಯ ಸಮೀಪ ಬಂದು ಚುಡಾಯಿಸುತ್ತಿದ್ದ. ಇದರಿಂದ ಈಕೆ ರೋಸಿ ಹೋಗಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟರು. ಮಂಜು ನಾಪತ್ತೆಯಾಗಿದ್ದು, ಈತನ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಜಯಶ್ರೀ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.