ADVERTISEMENT

ಕೆಡಿಪಿ, ಆಶ್ರಯ ಸಮಿತಿಗೆ ಯತೀಂದ್ರ ಸಿದ್ದರಾಮಯ್ಯ ನೇಮಕ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2023, 19:14 IST
Last Updated 27 ಆಗಸ್ಟ್ 2023, 19:14 IST
ಡಾ.ಯತೀಂದ್ರ
ಡಾ.ಯತೀಂದ್ರ   

ಮೈಸೂರು: ‘ನನ್ನನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿಗೆ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‍ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ವರುಣ ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತೇನೆ. ನೇಮಕದ ಬಗ್ಗೆ ಕೆಲವು ದಿನಗಳ ಹಿಂದೆಯೇ ಆದೇಶವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT