ADVERTISEMENT

ಹೆಬ್ಬಾಳದಲ್ಲಿ ಯುವಕ ಕೊಲೆ

ಪತ್ನಿ ಸಾವಿನಿಂದ ಖಿನ್ನತೆಗೆ ಜಾರಿದ ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 7:01 IST
Last Updated 23 ಜುಲೈ 2020, 7:01 IST

ಮೈಸೂರು: ಇಲ್ಲಿನ ಹೆಬ್ಬಾಳದ ಸಿಐಟಿಬಿ ಚೌಲ್ಟ್ರಿ ಸಮೀಪ ದರ್ಶನ್ (20) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

‘ಗುಂಪೊಂದು ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಅಂದಾಜು ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡ ಇವರು ರಸ್ತೆಬದಿಯಲ್ಲಿ ನರಳುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಇವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಹೂಟಗಳ್ಳಿ ನಿವಾಸಿಯಾದ ದರ್ಶನ್ ಆಟೊ ಚಾಲಕನಾಗಿದ್ದರು. ಮಂಗಳವಾರ ರಾತ್ರಿ ಮೂವರು ಯುವಕರು ಇವರ ಕುರಿತು ಮನೆಯಲ್ಲಿ ವಿಚಾರಿಸಿದ್ದರು. ಈ ಕುರಿತು ತನಿಖೆ ನಡೆದಿದೆ ಎಂದು ಹೇಳಿದ್ದಾರೆ. ಪ್ರಕರಣ ಹೆಬ್ಬಾಳ ಠಾಣೆಯಲ್ಲಿ ದಾಖಲಾಗಿದೆ.

ADVERTISEMENT

ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ‌

ಇಲ್ಲಿನ ಗೌಸಿಯಾನಗರದ ಉಸ್ಮಾನಿಯಾ ಬ್ಲಾಕ್‌ನ ನಿವಾಸಿ ರಿಯಾಜ್ ಅಹಮ್ಮದ್ (25) ತಮ್ಮ ಪತ್ನಿಯ ಸಾವಿನಿಂದ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ಪತ್ನಿ ಆಫ್ರೀನ್ ಖಾನಂ ಅವರು 14 ದಿನಗಳ ಹಿಂದೆ ಎದೆನೋವಿನಿಂದ ಮೃತಪಟ್ಟಿದ್ದರು. ಅಂದಿನಿಂದ ರಿಯಾಜ್ ಖಿನ್ನತೆಗೆ ಜಾರಿದ್ದರು. ಮಂಗಳವಾರ ರಾತ್ರಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಉದಯಗಿರಿ ಠಾಣೆಯಲ್ಲಿ ದಾಖಲಾಗಿದೆ.

ಇಬ್ಬರು ಕಳ್ಳರ ಬಂಧನ

ಜುಲೈ 6ರಂದು ಇಲ್ಲಿನ ಚಾಮರಾಜಜೋಡಿ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್, ಸಿಪಿಯು ಸೇರಿದಂತೆ ₹ 20 ಸಾವಿರ ಮೌಲ್ಯದ ಪರಿಕರಗಳನ್ನು ಕಳವು ಮಾಡಿದ್ದ ಇಬ್ಬರು ಕಳ್ಳರನ್ನು ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಶಿಕುಮಾರ್ ಹಾಗೂ ನರಸಿಂಹ ಬಂಧಿತರು. ಇವರು ಕಳವು ಮಾಡಿದ ವಸ್ತುಗಳನ್ನು ಆದಂಖಾನ್‌ ಮಸೀದಿ ರಸ್ತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು. ಈ ವೇಳೆ ಕಳವು ಮಾಡಿರುವ ಸಂಗತಿಯನ್ನು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.