ADVERTISEMENT

ಗುರುಮಠಕಲ್: ಗುಡುಗು ಸಹಿತ ಮಳೆ, ಸಿಡಿಲಿಗೆ ಎತ್ತು ಸಾವು 

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 13:52 IST
Last Updated 22 ಏಪ್ರಿಲ್ 2022, 13:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುರುಮಠಕಲ್ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಚಪೆಟ್ಲಾ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿದ್ದ ಭೀಮಪ್ಪ ಮಾಣಿಕ್ಯಪ್ಪ ಅವರಿಗೆ ಸೇರಿದ ಎತ್ತು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದೆ.

ಶುಕ್ರವಾರ ಸಂಜೆ ವೇಳೆ ಮೋಡಕವಿದ ವಾತಾವರಣವಿತ್ತು. ಗುಡುಗು ಸಮೇತ ಐದು ನಿಮಿಷಗಳ ಕಾಲ ಗಾಳಿ, ಮಳೆ ಸುರಿಯಿತು. ಆಗ ಜಮೀನಿನಲ್ಲಿದ್ದ ಎತ್ತಿಗೆ ಸಿಡಿಲು ಬಡಿದಿದ್ದು, ಸಿಡಿಲಿನ ಆಘಾತಕ್ಕೆ ಎತ್ತು ಸ್ಥಳದಲ್ಲೇ ಪ್ರಾಣ ಬಿಟ್ಟಿದೆ ಎಂದು ಸ್ಥಳೀಯ ನಿವಾಸಿ ಮಹಾದೇವಪ್ಪ ಭಂಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT