ರಾಯಚೂರು: ಪಕ್ಷದ ಹಿರಿಯ ಮುಖಂಡರು, ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಅವರಿಗೆ ಪಕ್ಷ ಟಿಕೆಟ್ ಈ ಬಾರಿ ಕೊಟ್ಟಿಲ್ಲ. ಹಾಗಂತ ಅದರಿಂದ ಪಕ್ಷದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತಿಗಿಂತ ಪಕ್ಷದ
ಸಿದ್ಧಾಂತ ಮುಖ್ಯವಾಗಿದೆ.
ಮುಖ್ಯಮಂತ್ರಿಗಳು ಶರೀಫ್ ಅವರ ಜೊತೆಗೆ ಮಾತುಕತೆ ನಡೆಸಿ ಅಸಮಾಧಾನ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜ್ಯ ಅಬಕಾರಿ ಖಾತೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು, ಮುಖಂಡರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಷರೀಫ್ ಅವರಿಗೆ ಟಿಕೆಟ್ ದೊರಕಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಪಕ್ಷದಿಂದ ವಿಭಜನೆ ಆಗುತ್ತದೆ ಎಂಬುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮೋದಿ ಅವರ ಅಲೆ ಎಲ್ಲೂ ಇಲ್ಲ. ಕಾಂಗ್ರೆಸ್ ಪಕ್ಷವು ತನ್ನ ಶಕ್ತಿಯೊಂದಿಗೆ ರಾಜ್ಯದ ಎಲ್ಲ ಸ್ಥಾನ ಗೆಲ್ಲುವ ಆಶಯ ಹೊಂದಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.