ADVERTISEMENT

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಧರಣಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 7:00 IST
Last Updated 6 ಮಾರ್ಚ್ 2014, 7:00 IST

ಮಾನ್ವಿ: ಮಾನ್ವಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆಗ್ರಹಿಸಿ ಸಮತಾ ಸೈನಿಕ ದಳ, ಭಾರತೀಯ ದಲಿತ ಪ್ಯಾಂಥರ್‌ ಹಾಗೂ ಜೈ ಕರ್ನಾ-­ಟಕ ರಕ್ಷಣಾ ವೇದಿಕೆಯ ಕಾರ್ಯ­ಕರ್ತರು ಬುಧವಾರ ತಾಲ್ಲೂಕು ಪಂಚಾ­ಯಿತಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಮಾನ್ವಿ ಪಟ್ಟಣದ ಇಂದಿರಾಗಾಂಧಿ ಕಾಲೊನಿ, ಜನತಾ ಕಾಲೊನಿ ಹಿಂದುಗಡೆ ವಾಸಿಸುವ ಜನರಿಗೆ ಸಮರ್ಪಕ ಕುಡಿಯುವ ನೀರು ಹಾಗೂ ವಿದ್ಯುತ್‌ ಸಂಪರ್ಕದ ವ್ಯವಸ್ಥೆ ಮಾಡಬೇಕು. ಬೇಸಿಗೆ ಸಂದರ್ಭದಲ್ಲಿ ಗ್ರಾಮೀಣ ಜನತೆಗೆ ಸಮರ್ಪಕ ಕುಡಿ­ಯುವ ನೀರು ಪೂರೈಕೆಗೆ ಮುಂಜಾ­ಗ್ರತಾ ಕ್ರಮ ಕೈಗೊಳ್ಳಬೇಕು. ಜಲ ನಿರ್ಮಲ ಯೋಜನೆ ಅಡಿಯಲ್ಲಿ ಕೈಗೊಂಡ ಕುಡಿಯುವ ನೀರಿನ ಕಾಮ­ಗಾರಿ­ಗಳನ್ನು ನಿಗದಿತ ಅವಧಿಯಲ್ಲಿ ಮುಗಿಸದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

ಸುವರ್ಣ ಗ್ರಾಮ ಯೋಜನೆ ಅಡಿಯಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ತರಬೇತಿ­ಯಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು. ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಕುಮಾರಸ್ವಾಮಿ ಕೇಂದ್ರ ಸ್ಥಾನದಲ್ಲಿ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸೂಚಿಸಬೇಕು. ತಾಲ್ಲೂಕು ಪಂಚಾಯಿತಿಯ ವಾಣಿಜ್ಯ ಮಳಿಗೆ­ಗಳನ್ನು ಪುನರ್‌ ಹಂಚಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇ­ರಿಕೆಗೆ ಧರಣಿ ನಿರತರು ಆಗ್ರಹಿಸಿದರು.

ಜೈ ಕರವೇ ಸಂಘಟನೆಯ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ, ಸಮತಾ ಸೈನಿಕ ದಳದ ಅಧ್ಯಕ್ಷ ಹನುಮಂತಪ್ಪ ನಿಲೋಗಲ್‌, ಭಾರ­ತೀಯ ದಲಿತ ಪ್ಯಾಂಥರ್‌ ಸಂಘಟನೆಯ ಕಾರ್ಯಾಧ್ಯಕ್ಷ ಲಕ್ಷ್ಮಣ ಜಾನೇಕಲ್‌, ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಯೇಸಪ್ಪ ಪೋತ್ನಾಳ, ಬಸವ­ರಾಜ ನಕ್ಕುಂದಿ, ಸೀತಮ್ಮ, ಎಂ. ನಾಗೇಂದ್ರಪ್ಪ, ಅಮರೇಶ, ಎಂ. ಆನಂದಕುಮಾರ, ಶೇಕ್ಷಾವಲಿ, ಅಂಬಮ್ಮ, ಲಕ್ಷ್ಮೀ, ಮೀನಾಕ್ಷಮ್ಮ, ಶೈಲಜಮ್ಮ, ಯಲ್ಲಮ್ಮ, ಪರ್ವೀನ್‌, ಹುಸೇನಮ್ಮ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.