ಸಿರವಾರ: ಸತತವಾಗಿ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿದ್ದು, ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳು ಜಲಾವೃತಗೊಂಡು ತೊಂದರೆ ಪಡುತಾಗಿದೆ. ಭಾನುವಾರ ರಾತ್ರಿ ಸುರಿದ ಮಳೆಗೆ ಸಮೀಪದ ಹೀರಾ ಗ್ರಾಮದ ಮನೆಗಳಿಗೆ ಮಳೆ ನೀರು ನುಗ್ಗಿ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು.
ಮನೆಗಳಲ್ಲಿನ ಧಾನ್ಯಗಳು ನೀರು ಪಾಲಾಗಿ ತೊಂದರೆ ಅನುಭವಿಸುವಂತಾಗಿದೆ. ಗ್ರಾಮದ ಯಲ್ಲಮ್ಮ ಭೋವಿ, ತಾಯಮ್ಮ, ದೇವೆಂದ್ರ, ಶಿವಣ್ಣ, ಮುದ್ದೆಪ್ಪ ನವರ ಮನೆಗಳು ಕುಸಿದಿವೆ.
ಸಿರವಾರ-ಹಟ್ಟಿ ಮುಖ್ಯ ರಸ್ತೆ ಮೇಲ್ಸೇತುವ ಕುಸಿದಿದ್ದು, ಸಂಪೂರ್ಣ ಬಸ್ ಸಂಚಾರ ಸ್ಥಗಿತಗೊಂಡಿದೆ. ಹೀರಾ ಗ್ರಾಮಕ್ಕೆ ಶಾಸಕ ಜಿ. ಹಂಪಯ್ಯನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಕಿರಿಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು. ಇಲಾಖೆ ಅಧಿಕಾರಿಗಳನ್ನು ಕರೆಸಿ ಕೂಡಲೇ ರಸ್ತೆ ದುರಸ್ತಿ ಕೈಗೊಳ್ಳುವಂತೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.