ರಾಯಚೂರು: ‘ಸಾಹಿತ್ಯ ಸಮ್ಮೇಳನದಲ್ಲಿ ಪ್ರೊ.ಚಂದ್ರಶೇಖರ ಪಾಟೀಲ ಅವರು ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಹುಯಿಲೆಬ್ಬಿಸುವುದು ಬೇಡ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
‘ಕನ್ನಡ ನಾಡು, ನುಡಿ ಮತ್ತು ಗಡಿ ಸಮಸ್ಯೆಗಳು ಪರಿಹಾರ ಕಾಣದ ಕಾರಣಕ್ಕಾಗಿ ಪ್ರಾದೇಶಿಕ ಪಕ್ಷದ ಅಗತ್ಯತೆಯ ಬಗ್ಗೆ ಅಥವಾ ಬೇರೊಂದು ಪಕ್ಷ ಬೆಂಬಲಿಸಲು ಅವರು ಈ ರೀತಿ ಹೇಳಿರಬಹುದು’ ಎಂದು ಅವರು ಭಾನುವಾರ ಲಿಂಗಸುಗೂರಿನಲ್ಲಿ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.