ADVERTISEMENT

ದೇವದಾಸಿ ಪದ್ಧತಿ ವಿರುದ್ಧ ಜನಜಾಗೃತಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 5:10 IST
Last Updated 24 ಜನವರಿ 2012, 5:10 IST

ರಾಯಚೂರು: .ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ತೊಂಡಿಹಾಳ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ದೇವದಾಸಿ ಅನಿಷ್ಟ ಪದ್ಧತಿ ಹೋಗಲಾಡಿಸಲು ಜನಜಾಗೃತಿ ಕಾರ್ಯಕ್ರಮ ನಡೆಯಿತು
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ದೇವದಾಸಿ ಪುನರ್ವಸತಿ ಯೋಜನೆ ಜಿಲ್ಲಾ ಘಟಕದವತಿಯಿಂದ ಆಯೋಜಿಸಲಾಗಿತ್ತು
.
ಬೀದಿ ನಾಟಕ, ಕರ ಪತ್ರ ವಿತರಣೆ, ಧ್ವನಿವರ್ಧಕ ಮೂಲಕ 1982 ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಹಾಗೂ ತಿದ್ದುಪಡಿ ಕಾಯ್ದೆ 2009ರ ಪ್ರಕಾರ ಯಾವುದೇ ಹೆಣ್ಣು ಮಗುವಿಗೆ, ಮಹಿಳೆಗೆ ಮುತ್ತು ಕಟ್ಟಿ ದೇವದಾಸಿಯನ್ನಾಗಿ ಮಾಡುವುದು ಜಾಮೀನು ರಹಿತ ಅಪರಾಧ. ಪ್ರೋತ್ಸಾಹಿಸಿದವರಿಗೆ 2ರಿಂದ 5 ವರ್ಷ ಜೈಲು ಶಿಕ್ಷೆ, 2ರಿಂದ 10 ಸಾವಿರ ದಂಡ ವಿಧಿಸುವುದು ಸೇರಿದಂತೆ ಹಲವು ಸಂಗತಿಗಳ ಬಗ್ಗೆ ಮಾಹಿತಿ ನೀಡಲಾಯಿತು. ಜನಜಾಗೃತಿ ರ‌್ಯಾಲಿಯನ್ನೂ ನಡೆಸಲಾಯಿತು ಎಂದು ದೇವದಾಸಿ ಪುನರ್ವಸತಿ ಯೋಜನೆ ಯೋಜನಾಧಿಕಾರಿ ಗೋಪಾಲ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.