ADVERTISEMENT

ಭಾರಿ ಮಳೆ: ಜನವಸತಿಗೆ ನೀರು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 9:14 IST
Last Updated 11 ಅಕ್ಟೋಬರ್ 2017, 9:14 IST

ರಾಯಚೂರು: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಜನವಸತಿಗಳು ಜಲಾವೃತವಾಗಿವೆ. ನಗರದ ದೇವಿನಗರ, ಸಿಯತಲಾಬ್‌, ಜವಾಹರನಗರಗಳಲ್ಲಿ ಕೆಲವು ಮನೆಗಳು ಕುಸಿದಿವೆ. ಯಾವುದೇ ಜೀವಹಾನಿಯಾಗಿಲ್ಲ.

ಬಡಾವಣೆಗಳ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡು ಜನರು ಹಾಗೂ ವಾಹನಗಳು ಸಂಚರಿಸುವುದು ದುಸ್ತರವಾಗಿವೆ. ಮಾನ್ವಿ ಹಾಗೂ ರಾಯಚೂರು ತಾಲ್ಲೂಕುಗಳಲ್ಲಿ ಅತಿಹೆಚ್ಚು ಮಳೆ ಸುರಿದಿದೆ. ಮಾನ್ವಿ ತಾಲ್ಲೂಕಿನ ಮಲ್ಲಟ್‌ ಹೋಬಳಿಯಲ್ಲಿ ದಾಖಲೆ 109 ಮಿಲಿ ಮೀಟರ್‌ ಮಳೆಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT