ADVERTISEMENT

ಮೂರು ಜನ ಅಭ್ಯರ್ಥಿ: 8 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2013, 9:47 IST
Last Updated 18 ಏಪ್ರಿಲ್ 2013, 9:47 IST
ದೇವದುರ್ಗ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಿನಿ ವಿಧಾನಸಭಾ ಪಕ್ಷದ ಮುಖಂಡರೊಂದಿಗೆ ಆಗಮಿಸಿದರು
ದೇವದುರ್ಗ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಿನಿ ವಿಧಾನಸಭಾ ಪಕ್ಷದ ಮುಖಂಡರೊಂದಿಗೆ ಆಗಮಿಸಿದರು   

ದೇವದುರ್ಗ: ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಇಲ್ಲಿನ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಮೂರು ಜನ ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿವೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಂಸದ ಎ.ವೆಂಕಟೇಶ ನಾಯಕ 02, ಕೆಜೆಪಿ ಪಕ್ಷದ ಶಾಂತಗೌಡ 02, ಸಿಪಿಐ (ಎಂ) ಪಕ್ಷದ ಬಸವರಾಜ ನಾಯಕ 01, ಜೆಡಿಯು ಪಕ್ಷದ ಚನ್ನಬಸವ ನಾಯಕ ಮತ್ತು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ 01 ನಾಮಪತ್ರ ಸಲ್ಲಿಸಿದ್ದಾರೆ.

13ನಾಮಪತ್ರ: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಇದುವರಿಗೂ ಒಟ್ಟು 6ಜನ ಅಭ್ಯರ್ಥಿಗಳಿಂದ 13 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ಮತ್ತು ಕೆಜಿಪಿ ಪಕ್ಷಗಳ ಮುಖಂಡರು ಪಕ್ಷದ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.