ADVERTISEMENT

ಶಿಕ್ಷಕರ ಕುಂಚದಲ್ಲಿ ಅರಳಿದ ಚಿತ್ರಕಲೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 5:14 IST
Last Updated 22 ಡಿಸೆಂಬರ್ 2017, 5:14 IST

ಮಾಗಡಿ: ಪಟ್ಟಣದ ಬಾಲಾಜಿ ನ್ಯಾಷನಲ್‌ ಪಬ್ಲಿಕ್‌ ಶಾಲೆ ಆವರಣದಲ್ಲಿನ ಡಾ.ಎ.ಪಿ.ಜೆ ಸಭಾಂಗಣದಲ್ಲಿ ಕಳೆದ ಎರಡು ದಿನಗಳಿಂದ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ನಡೆಯುತ್ತಿರುವ 10ನೇ ಸಮ್ಮೇಳನದಲ್ಲಿ ನಾಡಿನ ನಾನಾ ಮೂಲೆಗಳಿಂದ ಬಂದಿರುವ ಚಿತ್ರಕಲಾ ಶಿಕ್ಷಕರ ವಿವಿಧ ನಮೂನೆ ಬಣ್ಣದ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿವೆ.

ಸಮಾರೋಪ: ಡಿಸೆಂಬರ್‌ 22ರಂದು ಬೆಳಿಗ್ಗೆ 5 ಗಂಟೆಯಿಂದ ಶಿಬಿರಾರ್ಥಿಗಳಿಗೆ ಯೋಗಾಸನ ಏರ್ಪಡಿಸಲಾಗಿದೆ. ಸಾಮೂಹಿಕ ಭಾವಚಿತ್ರ ಪ್ರಾತ್ಯಕ್ಷಿಕೆ ಇದ್ದು, ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಮಾರಂಭ ನಡೆಯಲಿದೆ. ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಕಮರಿ ಸದ್ಗುರು ರಾಯಲಿಂಗೇಶ್ವರ ಮಠದ ಅಭಿನವ ಗುರುಲಿಂಗ ಜಂಗಮಸ್ವಾಮಿ, ಸಮ್ಮೇಳನದ ಅಧ್ಯಕ್ಷ ಡಾ.ಸಿ.ಚಂದ್ರಶೇಖರ್‌ ಭಾಗವಹಿಸಲಿದ್ದಾರೆ.

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬಿ.ಜೆ.ಪಿ ಮುಖಂಡ ಆರ್‌.ಅಶೋಕ್‌, ಚಿತ್ರಮಿತ್ರ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ, ರಂಗಧಾಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜುನಾಥ ‍ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಸಂಘಧ ಅಧ್ಯಕ್ಷ ಬಿ.ಜಿ.ಜವರೇಗೌಡ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.