ಜೈಲು (ಪ್ರಾತಿನಿಧಿಕ ಚಿತ್ರ)
ಲಿಂಗಸುಗೂರು: ಜಮೀನಿನಲ್ಲಿ ಸಾಗುವಳಿ ಮಾಡುವ ವಿಚಾರಕ್ಕೆ ವಕ್ತಿಯೊಬ್ಬರಿಗೆ ಕ್ರಿಮಿನಾಶಕ ಔಷಧಿ ಕುಡಿಸಿ ಕೊಲೆ ಮಾಡಿದ 10 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹37,500 ದಂಡ ವಿಧಿಸಿ 3ನೇ ಜಿಲ್ಲಾ ನ್ಯಾಯಾಧೀಶ ಬಿ.ಬಿ.ಜಕಾತಿ ಶುಕ್ರವಾರ ಆದೇಶಿಸಿದ್ದಾರೆ.
ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019 ಜ1ರಂದು ಸಂಜೆ ಅಮರೇಶ ಎನ್ನುವವರನ್ನು ಒತ್ತಾಯಪೂರ್ವಕವಾಗಿ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಲಾಗಿತ್ತು.
ಬಸಪ್ಪ ಸೇರಿದಂತೆ ಇನ್ನುಳಿದ 9 ಜನರ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಅಂದಿನ ತನಿಖಾಧಿಕಾರಿ ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ಸಿಪಿಐ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಾದ–ಪ್ರತಿವಾದ ಆಲಿಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯ ನ್ಯಾಯಾಧೀಶ ಬಿ.ಬಿ ಜಕಾತಿ ಶುಕ್ರವಾರ 10 ಜನ ಅಪರಾಧಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆಮ ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್.ಎ ಗಡಕರಿ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.