ರಾಯಚೂರು: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 93 ಜನರಿಗೆ ಕೋವಿಡ್ ದೃಢವಾಗಿದೆ. ಗುಣಮುಖವಾಗಿರುವ 131 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 1914 ಜನರು ಸೋಂಕಿತರು ಪತ್ತೆಯಾದಂತಾಗಿದೆ. ಕೋವಿಡ್ ನಿಂದ 21 ಜನರು ಮೃತಪಟ್ಟಿದ್ದಾರೆ. ಮಂಗಳವಾರ ಶಂಕಿತ 104 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು ಒಟ್ಟು 295 ಮಾದರಿಗಳ ವರದಿಗಳನ್ನು ನಿರೀಕ್ಣಿಸಲಾಗುತ್ತಿದೆ.
93 ಸೋಂಕಿತರಲ್ಲಿ ರಾಯಚೂರು 39, ಮಾನ್ವಿ 9, ದೇವದುರ್ಗ 7, ಲಿಂಗಸುಗೂರು 10 ಹಾಗೂ ಸಿಂಧನೂರು 8 ಪ್ರಕರಣಗಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.