ರಾಯಚೂರು: ಜಿಲ್ಲೆಯಾದ್ಯಂತ ಬುಧವಾರ ರಾತ್ರಿ 14 ಮಿಲಿ ಮೀಟರ್ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುವಾರ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಮಳೆಯಾಗಿಲ್ಲ.
ಲಿಂಗಸುಗೂರು ಮತ್ತು ಮಸ್ಕಿ ತಾಲ್ಲೂಕುಗಳಲ್ಲಿ ಅತಿಹೆಚ್ಚು ಮಳೆಯಾಗಿದ್ದು, ಹಳ್ಳಗಳಲ್ಲಿ ನೀರು ಹರಿಯಲಾರಂಭಿಸಿದೆ. ರಾಯಚೂರು ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಬಿರುಗಾಳಿಯಿಂದ ಎರಡು ಗುಡಿಸಲುಗಳ ಟಿನ್ಶೆಡ್ ಹಾರಿಹೋಗಿದ್ದು, ಯಾವುದೇ ಜೀವಹಾನಿಯಾಗಿಲ್ಲ.
ದೇವದುರ್ಗ ತಾಲ್ಲೂಕಿನಲ್ಲಿ 12, ಲಿಂಗಸುಗೂರು ತಾಲ್ಲೂಕಿನಲ್ಲಿ 32, ಮಾನ್ವಿ ತಾಲ್ಲೂಕಿನಲ್ಲಿ 10, ರಾಯಚೂರು ತಾಲ್ಲೂಕಿನಲ್ಲಿ 11, ಸಿಂಧನೂರು ತಾಲ್ಲೂಕಿನಲ್ಲಿ 4, ಮಸ್ಕಿ ತಾಲ್ಲೂಕಿನಲ್ಲಿ 9 ಹಾಗೂ ಸಿರವಾರ ತಾಲ್ಲೂಕಿನಲ್ಲಿ 20 ಮಿಲಿಮೀಟರ್ ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.