ADVERTISEMENT

ಶಕ್ತಿನಗರ: 36 ಗಣೇಶ ಮೂರ್ತಿ ಪ್ರತಿಷ್ಠಾಪನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2023, 14:11 IST
Last Updated 19 ಸೆಪ್ಟೆಂಬರ್ 2023, 14:11 IST
ಶಕ್ತಿನಗರದಲ್ಲಿ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಸಹಯೋಗದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಿಎಸ್‌ಐ ಸೌಮ್ಯಾ ಅವರು ಪೂಜೆ ಸಲ್ಲಿಸಿದರು
ಶಕ್ತಿನಗರದಲ್ಲಿ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಸಹಯೋಗದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಿಎಸ್‌ಐ ಸೌಮ್ಯಾ ಅವರು ಪೂಜೆ ಸಲ್ಲಿಸಿದರು   

ಶಕ್ತಿನಗರ: ಗಣೇಶ ಹಬ್ಬದ ಪ್ರಯುಕ್ತ ಶಕ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 36 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಶಕ್ತಿನಗರ, ಡಿ.ಯದ್ಲಾಪುರ ಮತ್ತು ದೇವಸೂಗೂರು ಗ್ರಾಮದ ವಾರ್ಡ್‌ಗಳಲ್ಲಿ ಗಣೇಶ ಮೂರ್ತಿಗಳನ್ನು ಕೂರಿಸಲಾಗಿದೆ.

ಗಜಾನನ ಯುವಕ ಮಂಡಳಿಗಳು, ಯುವಕರು, ಮಕ್ಕಳು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಟ್ರ್ಯಾಕ್ಟರ್ ಮತ್ತು ಇನ್ನಿತರ ವಾಹನಗಳಲ್ಲಿ ಮೂರ್ತಿಗಳನ್ನು ಮೆರವಣಿಗೆ ನಡೆಸಿ ಕೂರಿಸಿದರು. ಗಣೇಶ ಬಪ್ಪ ಮೋರಿಯಾ ಎಂದು ಜೈಕಾರ ಹಾಕುತ್ತಾ ತಮ್ಮ ಭಕ್ತಿಯನ್ನು ವಿಘ್ನ ನಿವಾರಕನಿಗೆ ಸಮರ್ಪಿಸಿದರು. ವಿವಿಧ ಸ್ಥಳಗಳಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಶಕ್ತಿನಗರ ಬಳಿಯ ಡಿ.ಯದ್ಲಾಪುರ ಗ್ರಾಮದಲ್ಲಿ ಗ ಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT