ರಾಯಚೂರು: ಮುಂಬರುವ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗಾಗಿ ಆಗಮಿಸಿರುವ ವಸತಿ ಸಚಿವ ವಿ.ಸೋಮಣ್ಣ ಅವರು, ಕ್ಷೇತ್ರದಲ್ಲಿ ಐದು ಸಾವಿರ ಹೊಸ ಮನೆಗಳನ್ನು ನಿರ್ಮಿಸಿ ಕೊಡುವುದು ಸೇರಿ ಹಲವು ಭರವಸೆಗಳನ್ನು ನೀಡಿದರು.
ಬುಧವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುತ್ತೇವೆ. ಕ್ಷೇತ್ರದಲ್ಲಿ ಕೃಷ್ಣಾ ಬಲದಂಡೆ ನಾಲೆಗೆ 5ಎ ಉಪಕಾಲುವೆ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಬೇಗನೆ ಪೂರ್ಣಗೊಳಿಸುತ್ತೇವೆ. ಮುಂದಿನ ಎರಡು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಲಾಗುವುದು. ನಂದವಾಡಗಿ ಏತನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು’ ಎಂದರು.
‘ಮಸ್ಕಿ ಕ್ಷೇತ್ರದ ಜನರಿಗೆ ಸಚಿವ ಸ್ಥಾನದ ಅಪೇಕ್ಷೆ ಇದೆ. ಪ್ರತಾಪಗೌಡ ಪಾಟೀಲ ಅವರು ಶಾಸಕರಾಗಿ ಆಯ್ಕೆಯಾದ ಒಂದು ವಾರದಲ್ಲಿ ಸಚಿವರನ್ನಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಲಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.