ಹಟ್ಟಿಚಿನ್ನದಗಣಿ: ರಾತ್ರಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
50 ಕೆ.ಜಿ ತೂಕದ 98 ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಹಟ್ಟಿ–ರಾಯಚೂರು ಮುಖ್ಯರಸ್ತೆಯ ಮಹಾಂತನಗರದ ಅಮರಯ್ಯ ಸ್ವಾಮಿ ಎನ್ನುವವರು ಅಕ್ಕಿಯನ್ನು ಜನರಿಂದ ಖರೀದಿಸಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಅದರ ಮೌಲ್ಯ ₹49 ಸಾವಿರ. ಅದನ್ನು ಗುರುಮಠಕಲ್ನ ನರೇಂದ್ರಪ್ಪ ಅವರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಅಮರಯ್ಯಸ್ವಾಮಿ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.