ರಾಯಚೂರು: ನಗರದ ಹೊರವಲಯದ ಅಸ್ಕಿಹಾಳ ಬಳಿ ಲಾರಿ ಹರಿದು 15 ಕುರಿಗಳು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ರಸ್ತೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿಕೊಂಡು ಕುರಿಗಳ ಮೇಲೆ ಹರಿಸಲಾಗಿದ್ದು, ಘಟನೆ ಬಳಿಕ ಸ್ಥಳೀಯರು ಚಾಲಕನನ್ನು ಹಿಡಿದು ಪೊಲಿಸರಿಗೆಒಪ್ಪಿಸಿದ್ದಾರೆ.
‘ಕುರಿಗಾಹಿಗಳು ಠಾಣೆಗೆ ದೂರು ನೀಡುವುದಕ್ಕೆ ನಿರಾಕರಿಸುತ್ತಿದ್ದು, ಲಾರಿ ಮಾಲೀಕರೊಂದಿಗೆ ರಾಜಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನೂ ಪ್ರಕರಣ ದಾಖಲಿಸಿಲ್ಲ’ ಎಂದು ಪಶ್ಚಿಮ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.