ರಾಯಚೂರು: ಗೋ ರಕ್ಷಣೆಯ ಮೇಲಿರುವ ಕಪಟ ಪ್ರೀತಿಯನ್ನು ನೆಪವಾಗಿಸಿಕೊಂಡು ಮನುಷ್ಯರನ್ನು ದ್ವೇಷಿಸುವ ದುಷ್ಟಶಕ್ತಿಗಳ ನೈತಿಕ ಪೊಲೀಸ್ಗಿರಿಯನ್ನು ತಡೆಯಲು ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (ಡಬ್ಲುಪಿಐ) ಆಗ್ರಹಿಸಿದೆ.
ಡಬ್ಲುಪಿಐ ತಾಲ್ಲೂಕು ಘಟಕದ ಪದಾಧಿಕಾರಿಗಳು ಲಿಂಗಸುಗೂರು ತಾಲ್ಲೂಕು ತಹಸೀಲ್ದಾರ್ರಿಗೆ ಮಂಗಳವಾರ ಈ ಸಂಬಂಧ ಮನವಿ ಸಲ್ಲಿಸಿದರು.
ಗೋ ರಕ್ಷಣೆ ಹೆಸರಿನಲ್ಲಿ ನಿರ್ದಿಷ್ಟ ಸಮುದಾಯದ ವ್ಯಕ್ತಿಗಳನ್ನು ಗುರುತಿಸಿ ಹಿಂಸಿಸುವುದು, ಕೊಲೆ ಮಾಡುವುದು ಸೇರಿದಂತೆ ದೇಶದಾದ್ಯಂತ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತ ಸಾಗಿವೆ. ಇಂತಹ ಗುಂಡಾ ಸಂಸ್ಕೃತಿಗೆ ನಡೆಸುವ ಪಟ್ಟಭದ್ರ ಹಿತಾಸಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.