ADVERTISEMENT

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಅವ್ಯವಹಾರ: ಆರೋಪ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 14:49 IST
Last Updated 11 ಫೆಬ್ರುವರಿ 2020, 14:49 IST

ರಾಯಚೂರು:ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿಎಸ್‌ಸಿಪಿ, ಎಸ್‌ಟಿಪಿ ಹಾಗೂ ವಿವಿಧ ಯೋಜನೆಯಡಿ ಅವ್ಯವಹಾರ ನಡೆದಿವೆ ಎಂದು ಆರೋಪಿಸಿರುವದಲಿತ ಸೇನೆ ಮಾನ್ವಿ ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯ ವಡ್ಡೇಪಲ್ಲಿ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ವಿ ತಾಲ್ಲೂಕಿನ ಸಮಾಜ ಕಲ್ಯಾಣ ಅಧಿಕಾರಿ 2015-16 ಹಾಗೂ 2016-17 ರಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅಡಿ ಸಿಸಿ ರಸ್ತೆ ಕಾಮಗಾರಿ ಮತ್ತು ಶೇ 24.10 ಅನುದಾನದಲ್ಲಿ ಶೈಕ್ಷಣಿಕ ಪ್ರವಾಸ ಮತ್ತು ಶೇ 22.75 ರಲ್ಲಿ ಹಾಸ್ಟೇಲ್‌ಗಳಿಗೆ ಟ್ರಂಕ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ದೂರಿದರು.

ಶೈಕ್ಷಣಿಕ ಪ್ರವಾಸ ಟೆಂಡರ್ ಕರೆಯದೆ ಬೋಗಸ್ ಬಿಲ್ ಸೃಷ್ಟಿಸಿ ಹಣ ಎತ್ತುವಳಿ ಮಾಡಿಕೊಂಡಿದ್ದಾರೆ. ಸ್ವಂತ ಕಾರನ್ನು ಇಲಾಖೆಗೆ ಬಾಡಿಗೆಗೆ ಕೊಟ್ಟು ಆಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಮಕ್ಕಳ ಹೆಸರಿನಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಅಕ್ರಮ ಆಸ್ತಿ ಹೊಂದಿದ್ದಾರೆ. ಇಲಾಖೆಯ ಹಲವಾರು ಯೋಜನೆಗಳಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಕೂಡಲೇ ಜಿಲ್ಲಾಧಿಕಾರಿ ಈ ಕುರಿತು ತನಿಖೆ ನಡೆಸಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸೇವೆಯಿಂದ ನಿವೃತ್ತಗೊಳಿಸಬೇಕು ಎಂದು ಒತ್ತಾಯಿಸಿದರು.

ಹೊಳೆಯಪ್ಪ ಉಟಕನೂರು, ಹನುಮಂತರಾಯ ,ಶರಣಪ್ಪ ಸಿರವಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.