ಸಿಂಧನೂರು: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಬ್ರಾಹ್ಮಣ ಸಮಾಜದ ನಗರಸಭೆ ಸದಸ್ಯೆ ಸರಿತಾ ವೆಂಕಟೇಶ ಬಂಡಿ ಅವರಿಗೆ ನೀಡಬೇಕು ಎಂದು ಬ್ರಾಹ್ಮಣ ಸಮಾಜದ ಮುಖಂಡರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಮನವಿ ಮಾಡಿದರು.
ಅಧ್ಯಕ್ಷ ಗೋವಿಂದರಾವ್ ಮಾತನಾಡಿ, ಸಿಂಧನೂರು ಪುರಸಭೆ ಹಾಗೂ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದ ನಂತರ ಒಮ್ಮೆಯೂ ಬ್ರಾಹ್ಮಣ ಸಮಾಜದ ಸದಸ್ಯರಿಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನವನ್ನು ನೀಡಿಲ್ಲ. ಈ ಭಾರಿ ಎರಡು ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಿರುವುದರಿಂದ ಒಂದನ್ನಾದರು ನಮ್ಮ ಸಮುದಾಯಕ್ಕೆ ನೀಡಬೇಕೆಂದು ಕೋರಿದರು.
ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಹ್ಲಾದಗುಡಿ ವಕೀಲ, ರಾಮಕೃಷ್ಣಾಚಾರ್ ಗೋನ್ವಾರ್, ನರಸಿಂಹಾಚಾರ್ ಮಠಾಧಿಕಾರ್, ನರಸಿಂಗ್ರಾವ್ ಚನ್ನಳ್ಳಿ, ವೆಂಕಣ್ಣಚಾರ್ ದೋಟಿಹಾಳ, ಆರ್.ವಿ.ಜೋಷಿ, ಎಂ.ಕೆ.ಗೌರಕರ್, ತಿರುಮಲರಾವ್ ಕುಲಕರ್ಣಿ, ಮನೋಹರರಾವ್ ಕುಲಕರ್ಣಿ, ಗೋಪಾಲರಾವ್ ಕುಲಕರ್ಣಿ, ಹನುಮಂತಾಚಾರ್ ಮಸ್ಕಿ, ಭೀಮಾಚಾರ್ ಪುರೋಹಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.